ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ಪುತ್ತೂರು: 2033-24ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ/ಆಶ್ರಮ ಶಾಲೆಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಆನ್‌ಲೈನ್(ssw.kar.nic.in) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೊಂಬೆಟ್ಟು, ಕೊಣಾಲು, ಕಡಬ, ಪಾಳ್ಯತ್ತಡ್ಕದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ 1ರಿಂದ 5ನೇ ತರಗತಿ ಸಹಶಿಕ್ಷಣ ವಿದ್ಯಾರ್ಥಿಗಳಿಗೆ ಬಲ್ನಾಡು ಸಾಜದಲ್ಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಪ್ರವೇಶ ಪಡೆಯಬಹುದು. ಪ್ರವೇಶ ಬಯಸುವ ಆಸಕ್ತ ಪ.ಜಾತಿ, ಪ.ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು/ಪೋಷಕರು ಈ ಸಂಸ್ಥೆಗಳನ್ನು ಅಥವಾ ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here