ನೆಲ್ಯಾಡಿ: ಪಾದಚಾರಿಗೆ ಬೈಕ್ ಡಿಕ್ಕಿ-ಗಾಯ

0

ನೆಲ್ಯಾಡಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನೆಲ್ಯಾಡಿ ಗ್ರಾಮದ ಪಡಡ್ಕ ಎಂಬಲ್ಲಿ ಜೂ.7ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಹಾರಪತ್ಯೆ ನಿವಾಸಿ ಸಾವೇರ್ ಡಿ.ಸೋಜ(76ವ.)ಗಾಯಗೊಂಡವರಾಗಿದ್ದಾರೆ. ಇವರು ನೆಲ್ಯಾಡಿ ಪೇಟೆಗೆ ಬಂದವರು ವಾಪಾಸು ಮನೆಗೆಂದು ನೆಲ್ಯಾಡಿ ಸಂತೆಕಟ್ಟೆ ಕಡೆಯಿಂದ ಪಡ್ಡಡ್ಕ ಕಡೆಗೆ ಹೋಗುವ ಡಾಮಾರು ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗಿ ಪಡ್ಡಡ್ಕ ಅಂಗನವಾಡಿ ಸಮೀಪ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್(ಕೆಎ 21, ಡಬ್ಲ್ಯು (8240) ಡಿಕ್ಕಿಯಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಸಾವೇರ್ ಡಿ.ಸೋಜಾ ಅವರು ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here