ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳೊಂದಿಗೆ ಸಂವಾದ

0

ಪುತ್ತೂರು:2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳ ಜೊತೆ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.

ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿ ಆದಿತ್ಯ ನಾರಾಯಣ ಪಿ ಎಸ್ ಹಾಗೂ ಕಲಾ ವಿಭಾಗದಲ್ಲಿ ರಾಜ್ಯಕ್ಕೆ 3ನೇ ರ್‍ಯಾಂಕ್‌ಪಡೆದ ಮಂಜುಶ್ರೀ ಕಳೆದ ವರ್ಷದ ತಮ್ಮ ಅನುಭವಗಳನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು. ಪರೀಕ್ಷೆಗಳಿಗೆ ಮುಂಚಿತವಾಗಿ ತಾವು ಮಾಡುತ್ತಿದ್ದ ತಯಾರಿ, ಓದುತ್ತಿದ್ದ ಪುಸ್ತಕಗಳು, ಮಾನಸಿಕ ಒತ್ತಡವನ್ನು ನಿಭಾಯಿಸಲು ಅನುಸರಿಸುತ್ತಿದ್ದ ಕ್ರಮಗಳು ಮುಂತಾದ ವಿಷಯಗಳ ಬಗ್ಗೆ ಕಿರಿಯರಿಗೆ ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಮಹೇಶ್ ನಿಟಿಲಾಪುರ ವಹಿಸಿದ್ದರು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪಲ್ಲವಿ ಭಟ್‌ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಖುಷಿ ಸ್ವಾಗತಿಸಿ ಸಂಸ್ಕೃತಿ ಜೈನ್‌ವಂದಿಸಿದರು.

LEAVE A REPLY

Please enter your comment!
Please enter your name here