ವಿವೇಕಾನಂದ ಪ.ಪೂ ಕಾಲೇಜಿನ ನಿಶ್ಚಲ್ ಕೆಜೆ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆ

0

ಪುತ್ತೂರು: ಸ್ಕೂಲ್‌ಗೇಮ್ ಫೆಡರೇಶನ್‌ ಆಫ್‌ ಇಂಡಿಯಾ ದೆಹಲಿಯಲ್ಲಿ ನಡೆಸುವ 66ನೇ ರಾಷ್ಟ್ರ ಮಟ್ಟದ ಯೋಗ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆಜೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಈತನು ಪುತ್ತೂರಿನ ನೆಹರೂ ನಗರದ ಪಿಎಮ್‌ ಜಿ ಎಸ್‌ ವೈಇಂಜಿನಿಯರ್‌ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ಈತನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಜ್ಯೋತಿ ಹಾಗೂ ಯತೀಶ್ ಬಾರ್ತಿಕುಮೆರ್‌ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here