ಪುತ್ತೂರು ಸ್ವರ ಮಾಧುರ್ಯ ಸಂಗೀತ ಬಳಗದಿಂದ ಶಾಸಕ ಅಶೋಕ್ ಕುಮಾರ್ ರೈಗೆ ಸನ್ಮಾನ

0

ಪುತ್ತೂರು : ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು ಮತ್ತು ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸುಧಾನ ಶಾಲಾ ಸಭಾ ಭವನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕಾವು ಹೇಮನಾಥ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶಾಸಕರು ಸಮಾಜ ಸೇವೆ ಮಾಡಬೇಕೆನ್ನುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ ಪುತ್ತೂರಿನ ಅಭಿವೃದ್ಧಿಯ ವಿಚಾರಗಳನ್ನು ಕೈಗೆತ್ತಿಕೊಂಡಿದ್ದೇನೆ ಎಂದು ಹೇಳಿ ಜನರ ಸಹಕಾರ ಕೋರಿದರು.


ಇದು ವೇಳೆ ಮಾತನಾಡಿದ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದರೆ ಕೆಲಸ ಆಗುವುದಿಲ್ಲ. ಆದರೆ ಪುತ್ತೂರು ಕ್ಷೇತ್ರ ರಾಜ್ಯದಲ್ಲಿ ಗುರುತಿಸುವಂತಾಗಬೇಕು, ಮಾದರಿ ಕ್ಷೇತ್ರ ಆಗಬೇಕೆಂಬ ನಿಟ್ಟಿನಲ್ಲಿ ಶಾಸಕರು ಬೇಕಾದ ಮಂತ್ರಿ, ಅಧಿಕಾರಿಗಳನ್ನು ಭೇಟಿ ಮಾಡಿ, ಮೆಡಿಕಲ್ ಕಾಲೇಜು ಪುತ್ತೂರಿಗೆ ತರಬೇಕೆನ್ನುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

LEAVE A REPLY

Please enter your comment!
Please enter your name here