ಉಪ್ಪಿನಂಗಡಿ: ದಿಢೀರ್ ಮಂತ್ರವಾದಿಯಾಗಿದ್ದಕ್ಕೆ ಸಂದೇಹ- ಹಲ್ಲೆ

0

ಉಪ್ಪಿನಂಗಡಿ: ಗುಜರಿ ವ್ಯಾಪಾರಿಯೋರ್ವ ದಿಢೀರ್ ಮಂತ್ರವಾದಿಯಾದ ಬಗ್ಗೆ ಸಂದೇಹಗೊಂಡ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಘಟನೆಯ ಬಗ್ಗೆ ಹಲ್ಲೆಗೀಡಾದ ಮಂತ್ರವಾದಿಯು ಪೊಲೀಸರಿಗೆ ದೂರು ನೀಡಿದ್ದನಾದರೂ, ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಕ್ತಾಯಗೊಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ವಡೆಂಕೇರಿ ಮನೆ ನಿವಾಸಿ 59 ರ ಹರೆಯದ ಮಹಮ್ಮದಾಲಿ ಎಂಬ ವ್ಯಕ್ತಿಯೇ ಹಲ್ಲೆಗೀಡಾಗಿದ್ದು, ಈ ವ್ಯಕ್ತಿ ಬಜತ್ತೂರು ಗ್ರಾಮದ ವಳಾಲು ಎಂಬಲ್ಲಿ ದಂಪತಿಯ ಮಗುವಿನ ಅನಾರೋಗ್ಯಕ್ಕೆ ಸಂಬಂಧಿಸಿ ನೂಲು ಮಂತ್ರಿಸಿಕೊಡುವ ವೇಳೆ ಸ್ಥಳಕ್ಕೆ ಬಂದ ಅನ್ಸಾರ್ ಮತ್ತಿತರ ಯುವಕರ ಗುಂಪು ಗುಜರಿ ವ್ಯಾಪಾರದ ನಡುವೆ ಮಂತ್ರವಾದಿಯಾದ ಬಗೆ ಹೇಗೆಂದು ಪ್ರಶ್ನಿಸಿ ನಕಲಿ ಮಂತ್ರವಾದಿ ಎಂದು ಆಪಾದಿಸಿ ತನ್ನ ಮೇಲೆ ಹಲ್ಲೆ ನಡೆಸಿರುತ್ತಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆಪಾದಿಸಲಾಗಿತ್ತು. ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಕ್ತಾಯಗೊಳಿಸಿದ್ದಾರೆ ಎನ್ನಲಾಗಿದೆ.

ಪ್ರಕರಣವು ಜೂ.3 ರಂದು ನಡೆದಿದ್ದು, ಹಲ್ಲೆ ನಡೆಸುವ ವಿಡಿಯೋ ವೈರಲ್ ಆದ ಬಳಿಕ ಮತ್ತೆ ದೂರು ಸಲ್ಲಿಕೆಯಾಗಿತ್ತು. ಆದರೆ ಬಳಿಕ ಉಭಯ ತಂಡದಿಂದ ಮಾತುಕತೆ ನಡೆದು ಪ್ರಕರಣವನ್ನು ರಾಜಿಯಲ್ಲಿ ಬಗೆಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here