ಮಾಣಿ-ಮೈಸೂರು ರಾ. ಹೆದ್ದಾರಿ ಸೇತುವೆ ಕಾಮಗಾರಿ ವೇಗ ಹೆಚ್ಚಿಸುವಂತೆ ಗುತ್ತಿಗೆದಾರಗೆ ಶಾಸಕರ ಸೂಚನೆ

0

ಪುತ್ತೂರು: ಮಾಣಿ-ಮೈಸೂರು ರಾ. ಹೆದ್ದಾರಿ 275 ರ ಸೇತುವೆಯ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ವಿಳಂಬ ಮಾಡದೆ ವೇಗ ಹೆಚ್ಚಿಸುವಂತೆ ಶಾಸಕರಾದ ಅಶೋಕ್ ರೈ ಯವರು ಗುತ್ತಿಗೆದಾರಗೆ ಸೂಚನೆಯನ್ನು ನೀಡಿದರು.
ಸಂಪ್ಯದಲ್ಲಿ ಕಿರು ಸೇತುವೆಯ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕರು ಮಳೆಗಾಲ ಆರಂಭವಾಗಿದೆ. ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ಮಳೆಗಾಲದಲ್ಲಿ ರಸ್ತೆ ಕಾಮಗಾರಿ ನಡೆದರೆ ಹೇಗೆ? ಶೀಘ್ರವೇ ಕಾಮಗಾರಿಯನ್ನು ಮುಗಿಸುವ ರೀತಿಯಲ್ಲಿ ಕೆಲಸ ಮಾಡಿ ಮತ್ತು ಕಾಮಗಾರಿ ವೇಗ ಹೆಚ್ಚಿಸಬೇಕು ಎಂದು ಗುತ್ತಿಗೆದಾರರಿಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಇದೇ ಹೈವೇಯಲ್ಲಿ ಸಂಪ್ಯ, ಕುಂಬ್ರ, ಶೇಕಮಲೆ, ಕಾವು, ಪೈಚಾರ್ ಸೇರಿದಂತೆ ಒಟ್ಟು ಎಂಟು ಕಡೆಗಳಲ್ಲಿ ಸೇತುವೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಮುಗಿಯದೇ ಇದ್ದರೆ ಮಳೆಗಾಲದಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಬಹುದು ಆ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಶಾಸಕರು ಸೂಚನೆಯನ್ನು ನೀಡಿದರು.

LEAVE A REPLY

Please enter your comment!
Please enter your name here