ಬಡಗನ್ನೂರು ಮೃತ ವಲಯ ಕಾಂಗ್ರೆಸ್ ಅಧ್ಯಕ್ಷರ ಮನೆಗೆ ಶಾಸಕರ ಭೇಟಿ – ಸಾಂತ್ವನ

0

ಪುತ್ತೂರು: ಇತ್ತೀಚೆಗೆ ನಿಧನರಾದ ಬಡಗನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಗೋಪಾಲಕೃಷ್ಣ ಸುಳ್ಯಪದವರು ಅವರ ಮನೆಗೆ ತೆರಳಿದ ಶಾಸಕರಾದ ಅಶೋಕ್ ರೈ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬಡಗನ್ನೂರು ಗ್ರಾಪಂ ಮಾಜಿ ಸದಸ್ಯರಾಗಿದ್ದ ಮೃತರು ಬಡಗನ್ನೂರು ವಲಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಸಕ್ರೀಯರಾಗಿದ್ದರು. ಇವರ ಅಗಲುವಿಕೆ ಪಕ್ಷಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಶಾಸಕರು ಹೇಳಿದರು. ಕುಟುಂಬದ ಜೊತೆ ಎಂದೆಂದೂ ಪಕ್ಷ ಇರುತ್ತದೆ ಎಂದು ಶಾಸಕರು ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಸಹಿತ ಸ್ಥಳೀಯ ನಾಯಕರು‌ ಶಾಸಕರ ಜೊತೆಗಿದ್ದರು.

LEAVE A REPLY

Please enter your comment!
Please enter your name here