ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಹನುಮಗಿರಿ ಕ್ಷೇತ್ರದಲ್ಲಿ ರಂಗಪೂಜೆ ಸೇವೆ

0

ಪುತ್ತೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಶ್ರೀಕ್ಷೇತ್ರ ಹನುಮಗಿರಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಚುನಾವಣಾ ಸಂದರ್ಭದಲ್ಲಿ ಮಾಡಿದ ಸಂಕಲ್ಪದಂತೆ ಶ್ರೀಪಂಚಮುಖಿ ಆಂಜನೇಯನಿಗೆ ರಂಗಪೂಜೆ ಸೇವೆ ನೆರವೇರಿಸಿದರು. ನೂತನವಾಗಿ ಲೋಕಾರ್ಪಣೆಗೊಂಡಿರುವ ಅಮರಗಿರಿಗೂ ಈ ಸಂದರ್ಭದಲ್ಲಿ ಭೇಟಿ ನೀಡಿ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಅಮರ ಜ್ಯೋತಿ ಭಾರತೀ ಮಂದಿರದ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಂ ಪಿ, ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಸಂತ್ ನಡುಬೈಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here