ಪ್ರಾಮಾಣಿಕವಾಗಿ ಪಕ್ಷಕ್ಕೆ ಕೆಲಸ ಮಾಡಿದ್ದೇನೆ, ಯಾವತ್ತೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿಲ್ಲ-ಝೈನ್ ಆತೂರು

0

ನೆಲ್ಯಾಡಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲವಾಗಿತ್ತು. ತದನಂತರ ನಮ್ಮ ನಾಯಕರಾದ ರಮಾನಾಥ ರೈ ಹಾಗೂ ಅವರ ಮಾರ್ಗದರ್ಶನದಂತೆ ಪಕ್ಷಕ್ಕೆ ಬೇಕಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ.

ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿ ಕಾಂಗ್ರೆಸ್ ಮೂಲಕ ಪಕ್ಷಕ್ಕೆ ಬೇಕಾಗಿ ಪ್ರಾಮಾಣಿಕ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ನನ್ನ ಮೇಲೆ ದ್ವೇಷದ ರಾಜಕಾರಣ ಮಾಡಿದ್ದಾರೆ, ನಾನು ಸ್ವಾಭಿಮಾನಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಇನ್ನೂ ಮುಂದೆಯೂ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುವೆ ನನನ್ನು ಉಚ್ಚಾಟನೆ ಮಾಡುವ ಮೊದಲು ಉಚ್ಚಾಟನೆ ಮಾಡಬೇಕದವರನ್ನು ಮೊದಲು ಮಾಡಿ ಎಂದು ವಿದ್ಯಾರ್ಥಿ ಕಾಂಗ್ರೆಸ್ ಕರ್ನಾಟಕ ರಾಜ್ಯ ಸಂಯೋಜಕರಾದ ಝೈನ್ ಆತೂರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here