ಕನ್ಯಾನ ಭಾರತ್ ಸೇವಾ ಆಶ್ರಮಕ್ಕೆ ಪುತ್ತಿಲ ಪರಿವಾರ ನಿಯೋಗ ಭೇಟಿ-ದೇಣಿಗೆ ಸಮರ್ಪಣೆ

0

ವಿಟ್ಲ: ಕನ್ಯಾನದಲ್ಲಿರುವ ಭಾರತ್ ಸೇವಾ ಆಶ್ರಮಕ್ಕೆ ಪುತ್ತಿಲ ಪರಿವಾರದ ನಿಯೋಗವು ಭೇಟಿ ನೀಡಿ ಪುತ್ತಿಲ ಪರಿವಾರದ ವತಿಯಿಂದ ರೂ. 25000 ದೇಣಿಗೆಯನ್ನು ನೀಡಲಾಯಿತು.

ಈ ಆಶ್ರಮದಲ್ಲಿರುವ ಜನಸಂಘ ಕಾಲದಿಂದಲೂ ನಿಶ್ವಾರ್ಥ ಸೇವೆಯನ್ನು ಸಲ್ಲಿಸಿರುವ ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಗ್ರಂಥಗಳ ಬಗ್ಗೆ ಅಪಾರ ಪಾಂಡಿತ್ಯವನ್ನು ಹೊಂದಿರುವ ಶ್ರೀ ಶಶಿಕಾಂತ್ ಬೋರ್ಕರ್ ಇವರನ್ನು ಸನ್ಮಾನಿಸಿ ವೈಯಕ್ತಿಕ ನೆಲೆಯಲ್ಲಿ ರೂ.20000 ನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here