ಶಾಂತಿನಗರ ಶಾಲೆಯಲ್ಲಿ ಆಲಂಕಾರು ಜೇಸಿಐ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

0

ಆಲಂಕಾರು: ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಆಲಂಕಾರು ಇದರ ವತಿಯಿಂದ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗಾಗಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.


ಶಾಲಾ ಮುಖ್ಯಶಿಕ್ಷಕ, ಜೇಸಿಐ ವಲಯ ತರಬೇತುದಾರ ಪ್ರದೀಪ್ ಬಾಕಿಲ ಅವರು ನಮ್ಮ ಪರಿಸರ ಹಿಂದೆ-ಇಂದು-ಮುಂದೆ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್‍ಯಾಗಾರ ನಡೆಸಿಕೊಟ್ಟರು. ಶಾಲಾ ವಿದ್ಯಾರ್ಥಿಗಳಿಗೆ ನನ್ನ ಪರಿಸರ ವಿಷಯದ ಬಗ್ಗೆ ಚಿತ್ರಕಲೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಉದ್ಯಾನವನಕ್ಕೆ ಜೇಸಿಐ ಆಲಂಕಾರು ಇದರ ವತಿಯಿಂದ ವಿವಿಧ ಜಾತಿಯ ಗಿಡಗಳನ್ನು ಕೊಡುಗೆಯಾಗಿ ನೀಡಲಾಯಿತು. ಜೇಸಿಐ ಆಲಂಕಾರು ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ ಅಲೆಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕ ಮಂಜುನಾಥ ಮಣಕವಾಡ ವಂದಿಸಿದರು. ಸಹಶಿಕ್ಷಕಿಯರಾದ ಪ್ರಮೀಳಾ, ವೀಕ್ಷಿತಾ, ತಾರಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here