ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ತಂಡ ಭೇಟಿ

0

ಶ್ರದ್ಧೆ, ಆಸಕ್ತಿಯಿಂದ ಅಭ್ಯಾಸ ಮಾಡಿದಾಗ  ಸಾಧನೆ ಸಾಧ್ಯ: ಪೂರಣ್ ವರ್ಮ

ವಿಟ್ಲ: ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಯಾದ ಪೂರಣ್ ವರ್ಮ  ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ರವರು ಭೇಟಿ ನೀಡಿದರು.
ನೂತನ ಶಿಕ್ಷಣ ಸಂಸ್ಥೆಯ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಲಾದ ಆಧುನಿಕ ಸೌಲಭ್ಯದ ಬಗ್ಗೆ ಪರಿಶೀಲನೆ ನಡೆಸಿ ವಿವಿಧ ಮಾಹಿತಿಯನ್ನು  ಪಡೆದುಕೊಂಡರು. ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಸ್ಥಾಪಕರು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷ ಜೆ.ಪ್ರಹ್ಲಾದ ಶೆಟ್ಟಿ  ಸ್ವಾಗತಿಸಿ, ನೂತ ಶಾಲಾ ಕ್ಯಾಂಪಸ್ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದರು. 


ಬಾಲವಿಕಾಸ ಟ್ರಸ್ಟ್ ನ  ಕಾರ್ಯದರ್ಶಿ ಮಹೇಶ್ ಜೆ.ಶೆಟ್ಟಿರವರು ತರಗತಿ ಕೊಠಡಿಗಳಲ್ಲಿ ಅಳವಡಿಸಿರುವ ಸ್ಮಾರ್ಟ್ ಬೋರ್ಡ್  ಹಾಗೂ ಎಲ್ ಕೆಜಿ ಯಿಂದ ಹತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳ ಚಟುವಟಿಕೆಯಾಧಾರಿತ  ಕಲಿಕೆಗೆ ಪೂರಕವಾಗುವ ವಿವಿಧ ಆಟಿಕೆಗಳು ಮತ್ತು ಮಾದರಿಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ಬಳಿಕ ಪೂರಣ್ ವರ್ಮರವರು ಮಾತನಾಡಿ ಶ್ರದ್ಧೆ ಮತ್ತು ಆಸಕ್ತಿಯಿಂದ ನಿರಂತರವಾಗಿ ಅಭ್ಯಾಸ ಮಾಡಿದಾಗ ಶಿಕ್ಷಣದಲ್ಲಿ ಸಾಧನೆ ಸಾಧ್ಯವಾಗುತ್ತದೆ. ಶಾಲೆಯ ಪರಿಸರ, ಶಿಕ್ಷಣ ವ್ಯವಸ್ಥೆ , ವಿದ್ಯಾರ್ಥಿಗಳ ಶಿಸ್ತು  ಹಾಗೂ ಆಡಳಿತ ಮಂಡಳಿಯವರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು ಸಂಸ್ಥೆಗೆ ಶುಭಕೋರಿದರು. 

ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಆಶ್ರಯ ಅಜ್ರಿ, ಮುಖ್ಯ ಶಿಕ್ಷಕಿ ಹೇಮಲತಾ, ಶಿಕ್ಷಕಿ ಅಮಿತಾ, ಜಯಾನಂದ ಪೆರಾಜೆ ವೀಕ್ಷಣಾ ತಂಡದಲ್ಲಿದ್ದರು. ಈ ಸಂದರ್ಭದಲ್ಲಿ ಬಾಲವಿಕಾಸ ಸಂಸ್ಥೆಯ  ನಮ್ರತಾ ರೈ, ಆಡಳಿತಾಧಿಕಾರಿ ರವೀಂದ್ರ ದರ್ಬೆ, ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here