ಜೂ.14: ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆಯಲ್ಲಿ ಹೃದಯ ಸಂಬಂಧಿತ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ಜಿಲ್ಲಾ ಪಂಚಾಯತ್‌ ಮಂಗಳೂರು, ದ.ಕ ಜಿಲ್ಲೆ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಪುತ್ತೂರು ಕಾರ್ಡಿಯೋಲಜಿ ಡೋರ್ ಸ್ಟೆಪ್ ಫೌಂಡೇಶನ್ ಸಂಸ್ಥೆ ಆಶ್ರಯದಲ್ಲಿ ಹೃದಯ ತಜ್ಞರಾದ ಡಾಕ್ಟರ್ ಪದ್ಮನಾಭ ಕಾಮತ್ ಹಾಗೂ ಅವರ ತಂಡದವರಿಂದ ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ಜೂ. 14ರಂದು ನಡೆಯಲಿದೆ.

ಶಿಬಿರವು ಬೆ. 9:30 ರಿಂದ ಮಧ್ಯಾಹ್ನ 12.30ವರೆಗೆ ಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಳ್ತಿಗೆಯಲ್ಲಿ ನಡೆಯಲಿದೆ.

ಫಲಾನುಭವಿಗಳು ಮಧುಮೇಹ ಹಾಗೂ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ, ಹೃದಯ ಚಿಕಿತ್ಸೆಗೆ ಒಳಗಾದವರು, ಕೆಂಜಿನಿಟಲ್‌ ರಿಮಾಟಿಕ್ ಹಾರ್ಟ್ ತೊಂದರೆ ಇರುವವರು ಇದರ ಸದುಪಯೋಗಪಡೆದುಕೊಳ್ಳಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ

LEAVE A REPLY

Please enter your comment!
Please enter your name here