ಸರ್ವೆ ಷಣ್ಮುಖ ಯುವಕ ಮಂಡಲದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

0

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ವಿಶ್ವ ಪರಿಸರ ದಿನವನ್ನು ಭಕ್ತಕೋಡಿ ಅಂಗನವಾಡಿ ಕೇಂದ್ರದ ಆವರಣದಲ್ಲಿಗಿಡ ನೆಡುವ ಮೂಲಕ ಆಚರಿಸಲಾಯಿತು.

ವೈದ್ಯರಾದ ಡಾ.ಸೀತಾರಾಮ್ ಭಟ್ ಕಲ್ಲಮ ಅವರು `ಲಕ್ಷ್ಮಣ ಫಲ’ ಗಿಡವನ್ನು ನೆಟ್ಟು ಚಾಲನೆ ನೀಡಿದರು. ಯುವಕ ಮಂಡಲದ ಗೌರವ ಸಲಹೆಗಾರರಾದ ಶ್ರೀನಿವಾಸ್ ಎಚ್.ಬಿ, ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು, ಪ್ರಧಾನ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಕರುಂಬಾರು, ಎಸ್.ಎಂ ಶರೀಫ್, ಸದಸ್ಯರಾದ ಪ್ರಭಾಕರ್ ಎಸ್.ಡಿ. ವಸಂತ್ ಕೈಪಂಗಳ, ಅಂಗನವಾಡಿ ಕಾರ್ಯಕರ್ತೆ ಸೀತಾ ಸರ್ವೆ, ಅಂಗನವಾಡಿ ಸಹಾಯಕಿ ಮಮತ ಹಾಗೂ ಮಕ್ಕಳು ಹಾಜರಿದ್ದರು.

LEAVE A REPLY

Please enter your comment!
Please enter your name here