ಪೊಲೀಸ್‌ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರಿಗೆ ಪುತ್ತಿಲ ಪರಿವಾರದಿಂದ ಧನಸಹಾಯ

0

ಪುತ್ತೂರು: ಚುನಾವಣೆ ಕಳೆದ ನಂತರ ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ಅಮಾನುಷವಾಗಿ ಪೊಲೀಸ್ ದೌರ್ಜನ್ಯಕ್ಕೊಳಕ್ಕಾದ ಕಾರ್ಯಕರ್ತರನ್ನು ಅವರ ಮನೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು.

ಈಗಾಗಲೇ ಆಸ್ಪತ್ರೆಯ ಹಾಗೂ ಇತರ ಖರ್ಚು ವೆಚ್ಚ ನೀಡಲಾಗಿದ್ದು ದೌರ್ಜನ್ಯಕ್ಕೊಳಕ್ಕಾದವರು ಕೆಲ ತಿಂಗಳು ಕೆಲಸಕ್ಕೆ ಹೋಗಲು ಸಾಧ್ಯವಾಗದಿರುವುದರಿಂದ ಅವರ ದೈನಂದಿನ ಖರ್ಚು ವೆಚ್ಚಗಳಿಗಾಗಿ ಪುತ್ತಿಲ ಪರಿವಾರದ ವತಿಯಿಂದ ಸಂಗ್ರಹಿಸಿದ ರೂ.1 ಲಕ್ಷವನ್ನು ನೀಡಲಾಯಿತು.

ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತಾ, ಅಂಬಿಕಾ ವಿದ್ಯಾಸಂಸ್ಥೆಗಳ ಮುಖ್ಯಸ್ಥರಾದ ಸುಬ್ರಹ್ಮಣ್ಯ ನಟ್ಟೋಜ, ಬೀಮ್ ಭಟ್ , ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಮುಖರಾದ ಅವಿನಾಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here