ನೆಲ್ಯಾಡಿ:ಮಾತು ಬಾರದ ಕಾರ್ಮಿಕನ ಮೇಲೆ ಹಲ್ಲೆ -ಆರೋಪ

0

ಪುತ್ತೂರು: ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಮಾತು ಬಾರದ ಕಾರ್ಮಿಕರೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ನೆಲ್ಯಾಡಿ ಸೈಂಟ್ ಜಾರ್ಜ್ ಕಾಲೇಜು ಬಳಿ ಸಿಮೆಂಟ್ ಇಟ್ಟಿಗೆ ತಯಾರಿಕ ಘಟಕವಾದ ನಯನ ಟ್ರೇಡರ್‍ಸ್‌ನ ಕೂಲಿ ಕಾರ್ಮಿಕ ಉತ್ತರ ಪ್ರದೇಶ ಮೂಲದ ಲಡ್ಡು(34ವ)ರವರು ಗಾಯಗೊಂಡವರು.

ಅವರಿಗೆ ಕಿವಿ ಕೇಳಿಸದ ಮತ್ತು ಮಾತು ಬರದವರಾಗಿದ್ದರಿಂದ ಘಟನೆಯನ್ನು ಹಿಂದಿಯಲ್ಲಿ ಬರೆದಿದ್ದಾರೆ. ‘ ನಾನು ಸುಮಾರು 10 ವರ್ಷಗಳಿಂದ ನೆಲ್ಯಾಡಿ ವಿ ಜೆ ಜೋಸೆಪ್ ಅವರ ಮಾಲಕತ್ವದದ ನಯನ ಟ್ರೇಡರ್‍ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಜೂ. 13ರಂದು ಬೆಳಿಗ್ಗೆ ಕೆಲಸ ಮುಗಿಸಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಮೋಹನ್, ಸದಾನಂದ್, ಶಿವಾನಂದ್, ವಾರಿಜ, ಪ್ರಕಾಶ್, ಉಮೇಶ್, ಮಂಜುಳ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿದ್ದಾರೆ. ಜಾಗದ ವಿಚಾರಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here