![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಮಳೆಗಾಲ ಪ್ರಾರಂಭವಗಿರುವ ಹಿನ್ನೆಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಟೆಲಿಪೋನ್/ವಿದ್ಯುತ್ ಕೇಬಲ್/ಕುಡಿಯುವ ನೀರು ಕೊಳವೆ ಸೇರಿದಂತೆ ಇನ್ನಿತರ ರಸ್ತೆ ಅಗೆತ ಮಾಡುವುದನ್ನು ಜೂ.15 ರಿಂದ ನಾಲ್ಕು ತಿಂಗಳು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಸೂಚನೆ ನೀಡಿದ್ದಾರೆ.
![](https://puttur.suddinews.com/wp-content/uploads/2023/06/IMG-20230614-WA0039.jpg)
ಮಳೆಗಾಲದಲ್ಲಿ ರಸ್ತೆ ಬದಿಯ ಅಗೆತದಿಂದ ಮಣ್ಣು ಸಡಿಲವಾಗಿ ವಾಹನ, ಸಾರ್ವಜನಿಕರಿಗೆ ಅಪಾಯ ಸಂಭವಿಸುವ ಸಾಧ್ಯತೆ ಮತ್ತು ಇತರ ಅವಘಡ ಅಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜೂ. 15 ರಿಂದ ಸೆ.30ರ ತನಕ ರಸ್ತೆ ಅಗೆತ ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ತಿಳಿಸಿದ್ದಾರೆ.