ಪುತ್ತೂರು: ಅನುದಾನ ಹಂಚಿಕೆ ಮಾಡುವ ಉದ್ದೇಶದಿಂದ ತಮ್ಮ ಗ್ರಾಮ ವ್ಯಾಪ್ತಿಯಲ್ಲಿ ಆಗಬೇಕಾದ ವಿವಿಧ ಕಾಮಗಾರಿಗಳ ಪಟ್ಟಿ ಕಳುಹಿಸಿಕೊಡುವಂತೆ ಬೂತ್ ಮತ್ತು ವಲಯ ಅಧ್ಯಕ್ಷರುಗಳಿಗೆ ಪುತ್ತೂರು ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.
![](https://puttur.suddinews.com/wp-content/uploads/2023/06/67aea200-850e-4d54-a6c9-a1a6d0e20497.jpg)
ಇನ್ನೇನು ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗಲಿದ್ದು ಅನುದಾನವನ್ನು ಹಂಚಿಕೆ ಮಾಡುವ ಉದ್ದೇಶದಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ವಲಯಾಧ್ಯಕ್ಷರುಗಳು ಮತ್ತು ಬೂತ್ ಅಧ್ಯಕ್ಷರುಗಳು ಕಾಮಗಾರಿಯ ಪಟ್ಟಿಯನ್ನು ಸಿದ್ದಪಡಿಸಿ ಶಾಸಕರ ಕಚೇರಿಗೆ ತಲುಪಿಸುವಂತೆ ಅಥವಾ ಶಾಸಕರ ಪಿಎ ಬಳಿ ನೀಡುವಂತೆಯೂ ಮನವಿ ಮಾಡಿಕೊಂಡಿದ್ದಾರೆ.