ಸರ್ವೆ ಷಣ್ಮುಖ ಯುವಕ ಮಂಡಲದಿಂದ ಭಕ್ತಕೋಡಿ ಅಂಗನವಾಡಿಗೆ ಕೊಡುಗೆ

0

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ಭಕ್ತಕೋಡಿ ಅಂಗನವಾಡಿ ಕೇಂದ್ರಕ್ಕೆ ಸರಕಾರದಿಂದ ದೊರೆತ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ವ್ಯವಸ್ಥಿತ ರೀತಿಯಲ್ಲಿ ನೀರು ಸರಬರಾಜು ಆಗುವಂತೆ ನೀರಿನ ಟ್ಯಾಂಕನ್ನು ಸುಮಾರು 4,393 ರೂ.ವೆಚ್ಚದಲ್ಲಿ ಕಟ್ಟೆಯನ್ನು ಕಟ್ಟಿ ಕಬ್ಬಿಣದ ಸ್ಟ್ಯಾಂಡನ್ನು ಎತ್ತರಕ್ಕೆ ಏರಿಸಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ದಾನಿಗಳಾದ ಡಾ. ಸೀತಾರಾಮ್ ಭಟ್ ಕಲ್ಲಮ, ಯುವಕ ಮಂಡಲದ ಗೌರವ ಸಲಹೆಗಾರ ಶ್ರೀನಿವಾಸ್ ಎಚ್.ಬಿ, ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು, ಪ್ರಧಾನ ಕಾರ್ಯದರ್ಶಿ ಮನೋಜ್ ಸುವರ್ಣ ಸೊರಕೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಬ್ರಹ್ಮಣ್ಯ ಕರುಂಬಾರು, ಎಸ್.ಎಂ. ಶರೀಫ್, ಸದಸ್ಯರಾದ ಪ್ರಭಾಕರ್ ಎಸ್.ಡಿ, ವಸಂತ್ ಕೈಪಂಗಳ, ಅಂಗನವಾಡಿ ಕಾರ್ಯಕರ್ತೆ ಸೀತಾ ಸರ್ವೆ, ಅಂಗನವಾಡಿ ಸಹಾಯಕಿ ಮಮತಾ ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here