ಇಡಬೆಟ್ಟು ಶಾಲೆಯಲ್ಲಿ ದಾನಿಗಳಿಂದ ಸಮವಸ್ತ್ರ, ಲೇಖನ ಸಾಮಾಗ್ರಿಗಳ ವಿತರಣೆ

0

ಪುತ್ತೂರು: ಇಡಬೆಟ್ಟು ಸ.ಹಿ.ಪ್ರಾ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಾನಿಗಳಾದ ಅಂಕೋತಿಮಾರ್ ಜಗನ್ನಾಥ ರೈ, ಶೈಲ ಉಮಾಕಾಂತ್, ಆಶಿಕಾ ಬೇಕಲ್ ಇವರುಗಳಿಂದ ಸಮವಸ್ತ್ರ ಹಾಗೂ ಲೇಖನ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಅದ್ರಾಮ, ಹಿತೇಶ್ ಬೇಕಲ್, ಕ್ಷಮಾ ಹಿತೇಶ್, ವಿವೇಕಾನಂದ ಪಾಲಿಟೆಕ್ನಿಕ್‌ನ ಉಪನ್ಯಾಸಕ ಗುರುಪ್ರಸನ್ನ, ಹಂಟ್ಯಾರು ಶಾಲಾ ಶಿಕ್ಷಕಿ ಯಶೋದಾ ಪಿ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಶಿಕ್ಷಕಿ ವಿಶಾಲಾಕ್ಷಿ ಸ್ವಾಗತಿಸಿ ವಂದಿಸಿದರು. ಶಾಲಾ ಮುಖ್ಯಗುರು ದೇವಪ್ಪ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕ ಸುರರಾಜ್ ಹಾಗೂ ಅಕ್ಷರದಾಸೋಹ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here