ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್‍ಯಕಾರಿ ಸಮಿತಿ ಸಭೆ-ಅಶೋಕ್ ರೈ ಅಭಿನಂದನಾ ಸಮಾರಂಭಕ್ಕೆ ಪೂರ್ಣ ಸಹಕಾರ

0

ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಮಿತಿಯ ಕಾರ್‍ಯಕಾರಿ ಸಮಿತಿ ಸಭೆಯು ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು.

ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಹಾಗೂ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆ ಗುತ್ತುರವರುಗಳು ಮಾತನಾಡಿ ಜೂ.18 ರಂದು ಪುತ್ತೂರು ಬಂಟರ ಸಂಘದ ಆಶ್ರಯದಲ್ಲಿ ಬಂಟರಭವನದಲ್ಲಿ ನಡೆಯಲಿರುವ ಶಾಸಕ ಅಶೋಕ್ ಕುಮಾರ್ ರೈಯವರ ಅಭಿನಂದನಾ ಸಮಾರಂಭಕ್ಕೆ ಮಾತೃ ಸಂಘ ಪೂರ್ಣರೀತಿಯ ಸಹಕಾರವನ್ನು ನೀಡಲಿದ್ದು, ಕಾರ್‍ಯಕ್ರಮಕ್ಕೆ ಬಂಟ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು.

ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಹಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಮಾತೃ ಸಂಘದ ನಿರ್ದೇಶಕರುಗಳಾದ ಕುಂಬ್ರ ದುರ್ಗಾಪ್ರಸಾದ್ ರೈ, ಪುರಂದರ ರೈ ಮಿತ್ರಂಪಾಡಿ, ಜೈರಾಜ್ ಭಂಡಾರಿ ನೊಣಾಲು, ವಾಣಿ ಎಸ್.ಶೆಟ್ಟಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್‍ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ ಹಾಗೂ ನಿರ್ದೇಶಕ ದಿವ್ಯನಾಥ ಶೆಟ್ಟಿ ಕಾವು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here