ಆಲಂಕಾರು: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಯೋಜನೆಯಲ್ಲಿ ಆರ್ಥಿಕ ನೆರವು

0

ಪುತ್ತೂರು: ಮಂಗಳೂರು ಕ್ಯಾಂಪ್ಕೋ ಸಂಸ್ಥೆ ವತಿಯಿಂದ ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮ ಆಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು.

ಕ್ಯಾಂಪ್ಕೋ ಸಂಸ್ಥೆಯ ಸಕ್ರಿಯ ಸದಸ್ಯ ರಾಮಕುಂಜ ನಿವಾಸಿ ಬಾಬು ಮೂಲ್ಯರವರ ಆಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆಗೆ ಕ್ಯಾಂಪ್ಕೋ ವತಿಯಿಂದ ನೀಡಲಾದ ರೂ.50000 ಚೆಕ್‌ನ್ನು ಸಂಸ್ಥೆಯ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಹಸ್ತಾಂತರಿಸಿದರು. ಕ್ಯಾಂಪ್ಕೋ ಸಂಸ್ಥೆಯ ಶಾಖಾಧಿಕಾರಿ ಉದಯ ಬಿ.ಆರ್. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here