ಸೌಜನ್ಯ ರೇಪ್‌ ಆ್ಯಂಡ್‌ ಮರ್ಡರ್‌ ಕೇಸ್‌ – ಸಂತೋಷ್‌ ರಾವ್‌ ನಿರ್ದೋಷಿ – ಸಿಬಿಐ ಕೋರ್ಟ್‌ ತೀರ್ಪು ಪ್ರಕಟ

0

ಪುತ್ತೂರು: ಧರ್ಮಸ್ಥಳ ಉಜಿರೆಯ ವಿದ್ಯಾರ್ಥಿನಿ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ಕೋರ್ಟ್‌ ತೀರ್ಪು ಪ್ರಕಟಿಸಿದ್ದು ಆರೋಪಿ ಸಂತೋಷ್‌ ರಾವ್‌ ನಿರ್ದೋಷಿ ಎಂದು ಕೇಸಿನಿಂದ ಖುಲಾಸೆ ಮಾಡಿದೆ. ಸಂತೋಷ್‌ ರಾವ್‌ ವಿರುದ್ದ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷ ಮುಕ್ತಗೊಳಿಸಿರುವುದಾಗಿ ನ್ಯಾಯಮೂರ್ತಿ ಸಿ ಬಿ ಸಂತೋಷ್‌ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ. ಉಜಿರೆ ಎಸ್‌ ಡಿ ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. 2012ರ ಅ.10ರಂದು ಧರ್ಮಸ್ಥಳದ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು.

LEAVE A REPLY

Please enter your comment!
Please enter your name here