ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ, ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಸಂಕ್ರಮಣ ಸೇವೆ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಜೂ.15 ರಂದು ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ ನಡೆಯಿತು.

ಕ್ಷೇತ್ರದ ಅರ್ಚಕರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ಕುಂಡ ಮೊಗೇರ ಮಣ್ಣಾಪು, ಅಣ್ಣು ಮಣ್ಣಾಪು, ರವಿ ಮಣ್ಣಾಪು ಹಾಗೂ ಗುರುವ ಮಣ್ಣಾಪು, ವಿಶ್ವನಾಥ್ ಮಣ್ಣಾಪು, ಉಮೇಶ್ ಮಣ್ಣಾಪು, ಗಂಗಾಧರ ಮಣ್ಣಾಪು, ಸುಧೀರ್ ಅತ್ತಾಳ, ವಿಶ್ವನಾಥ್ ಪೂಜಾರಿ ಮೊಟ್ಟೆತ್ತಡ್ಕ, ವಿಶ್ವನಾಥ್ ನಾಯ್ಕ ಅಮ್ಮುಂಜ, ಶ್ರೀ ರಾಮ್ ಫ್ರೆಂಡ್ಸ್ ಪಂಜಳ ಸದಸ್ಯರು ಸಹಿತ ನೂರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು.

ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ(ಅಗೇಲು ಬಾಬ್ತು ರೂ.1200) ನಡೆಯಲಿದ್ದು, ಆದಿತ್ಯವಾರ, ಮಂಗಳವಾರ, ಶುಕ್ರವಾರ ಭಕ್ತಾಧಿಗಳಿಗೆ ಪ್ರಾರ್ಥನೆ ಸಲ್ಲಿಸಲು ಶ್ರೀ ಕ್ಷೇತ್ರದಲ್ಲಿ ಅವಕಾಶವಿದೆ. ಅಗೇಲು ಸೇವೆ ನೀಡುವ ಭಕ್ತಾಧಿಗಳು ಎರಡು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರ ಮಣ್ಣಾಪು ಆಡಳಿತ ಸಮಿತಿ(ಮೊ:9591546107, 7349237945, 7760580714)ಯನ್ನು ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here