ಅನಾರೋಗ್ಯದಿಂದ ಬಳಲುತ್ತಿದ್ದ ಮಾಣಿಯ ಇರ್ಶಾದ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನ

0

ಪುತ್ತೂರು: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಣಿ ಸೂರಿಕುಮೇರ್‌ ನ ಇರ್ಶಾದ್ ಉಮರ್ (33) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ.16 ರಾತ್ರಿ ನಿಧನರಾಗಿದ್ದಾರೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇರ್ಶಾದ್ ಅನಾರೋಗ್ಯದ ನಿಮಿತ್ತ ವಾರದ ಹಿಂದೆ ಊರಿಗೆ ಬಂದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಇರ್ಶಾದ್ ಕೊನೆಯುಸಿರೆಳೆದಿದ್ದಾರೆ. ಮೃತರು ತಾಯಿ, ಪತ್ನಿ, ನಾಲ್ಕು ವರ್ಷದ ಗಂಡು ಮಗು ಮತ್ತು ಆರು ತಿಂಗಳ ಹೆಣ್ಣು ಮಗಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here