ಹೈಕೋರ್ಟ್ ನ್ಯಾಯಮೂರ್ತಿ – ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಇವರಿಗೆ ಅಭಿನಂದನಾ ಕಾರ್ಯಕ್ರಮ

0

ಪುತ್ತೂರು ನ್ಯಾಯಾಲಯ ನನಗೆ ಪ್ರಥಮ ಮಾರ್ಗದರ್ಶನ – ರಾಜೇಶ್ ರೈ ಕಲ್ಲಂಗಳ

ಪುತ್ತೂರು: ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳರವರಿಗೆ ವಕೀಲರ ಸಂಘ ಮತ್ತು ನ್ಯಾಯಾಲಯದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜೂ.17ರಂದು ಪುತ್ತೂರು ಪರಾಶರ ಸಭಾಭವನದಲ್ಲಿ ನಡೆಯಿತು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ ವಿ ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದ ವೇದಿಕೆಯಲ್ಲಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸರಿತಾ ಡಿ, ಖಜಾಂಜಿ ಸೀಮಾ ನಾಗರಾಜ್ , ಹಿರಿಯ ವಕೀಲರಾದ ರಾಮ್ ಮೋಹನ್ ರಾವ್, ಮೋಹನ್ ಭಟ್, ಜಯರಾಮ ಭಟ್, ಕೆ ಆರ್ ಆಚಾರ್ಯ, ಉದಯಶಂಕರ್ ಶೆಟ್ಟಿ ಮತ್ತು ಸಂಘದ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.


ಸುರೇಶ್ ರೈ ಪಡ್ಡಂಬೈಲು, ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಅವರನ್ನು ಸಭೆಗೆ ಪರಿಚಯಿಸಿದರು. ಕೋಶಾಧಿಕಾರಿ ಶ್ಯಾಮಪ್ರಸಾದ್ ಕೈಲಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕೆ ಅತಿಥಿಗಳಿಗೆ ಪುಸ್ತಕ, ಹಾರ ಸಮರ್ಪಿಸಿದರು. ಸಂಘದ ಮಾಜಿ ಅಧ್ಯಕ್ಷ ಉದಯಶಂಕರ್ , ಕೆ ಆರ್ ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ಸುಶ್ಮಿತಾ, ಅರ್ಚನಾ ಪ್ರಾರ್ಥಿಸಿದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ ಸ್ವಾಗತಿಸಿದರು.


ವಕೀಲರ ಸಂಘದ ಮಾಜಿ ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ, ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here