ಏಕತ್ತಡ್ಕ ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡನಾಟಿ ಕಾರ್ಯಕ್ರಮ

0

ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯ ಇದರ ವತಿಯಿಂದ ಒಳಮೊಗ್ರು ಗ್ರಾಮದ ಏಕತ್ತಡ್ಕ ಅಜ್ಜಿಕಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ನಡೆಯಿತು.

ಶಾಲಾ ಮುಖ್ಯಗುರು ಚಿತ್ರಾ ಸಭಾಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ತಾಲೂಕು ಸದಸ್ಯ ಶಶಿಕಿರಣ್ ಮೊಡಪ್ಪಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಯೋಜನೆಯ ಕೃಷಿ ಅಧಿಕಾರಿ ಉಮೇಶ್‌ರವರು ವಿದ್ಯಾರ್ಥಿಗಳಿಗೆ ಮನೆಗೊಂದು ಗಿಡ ಎಂಬಂತೆ ಸಸಿ ವಿತರಿಸಿ, ಪರಿಸರದ ಬಗ್ಗೆ ಮಾಹಿತಿ ನೀಡಿದರು. ಒಳಮೊಗ್ರು ಗ್ರಾಪಂ ಸದಸ್ಯ ಮಹೇಶ್ ರೈ, ವಲಯಾಧ್ಯಕ್ಷ ಬಾಲಕೃಷ್ಣ, ಒಕ್ಕೂಟ ಅಧ್ಯಕ್ಷೆ ಸರೋಜ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ವನಿತಾ, ನಳಿನಾಕ್ಷಿ, ಒಕ್ಕೂಟ ಪದಾಧಿಕಾರಿಗಳಾದ ಅರುಷಾ, ಶಿಲ್ಪಾ, ವನಿತಾ, ಅಧ್ಯಾಪಕವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಪ್ರೀತಂ ಸ್ವಾಗತಿಸಿ, ಸೇವಾಪ್ರತಿನಿಧಿ ತ್ರಿವೇಣಿ ಪಲ್ಲತ್ತಾರು ವಂದಿಸಿದರು. ವಲಯ ಮೇಲ್ವಿಚಾರಕ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here