ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ನ್ಯಾಯಮೂರ್ತಿ ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

0

ಪುತ್ತೂರು: ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ನ್ಯಾಯಮೂರ್ತಿ ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಜೂ.17 ರಂದು ಸಂಜೆ ಮಹತೋಭಾರ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ದೇವಳದ ಸತ್ಯಧರ್ಮ ನಡೆಯಲ್ಲಿ ಅರ್ಚಕರು ಪ್ರಾರ್ಥಿಸಿ ಪ್ರಸಾದ ವಿತರಣೆ ಮಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ್ ಗೌಡ, ವಕೀಲರ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಕಾರ್ಯದರ್ಶಿ ಚಿನ್ಮಯ್ ರೈ, ಮಹೇಶ್ ಕಜೆ, ಸುರೇಶ್ ರೈ ಪಡ್ಡಂಬೈಲು ಸಹಿತ ವಕೀಲರ ಸಂಘದ ಸದಸ್ಯರು‌ ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here