ಉಪ್ಪಿನಂಗಡಿ: ಗಾಂಜಾ ಸೇವನೆ-ಪ್ರಕರಣ ದಾಖಲು

0

ಉಪ್ಪಿನಂಗಡಿ: ಇಲ್ಲಿನ ರಾಮನಗರ ದಿ.ಪೊಡಿಯಾ ಎಂಬವರ ಮಗ ಗಾಡ್ ಪ್ರೀ ಯಾನೆ ಸುರೇಶ(52ವ.)ಎಂಬವನ ವಿರುದ್ಧ ಗಾಂಜಾ ಸೇವನೆ ಮಾಡಿರುವ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜೂ.16ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸ್ ಠಾಣೆ ಉಪನಿರೀಕ್ಷಕರು(ತನಿಖೆ) ರೌಂಡ್ಸ್‌ನಲ್ಲಿದ್ದ ವೇಳೆ ಆರೋಪಿ ಗಾಡ್ ಪ್ರೀ ಯಾನೆ ಸುರೇಶ ಉಪ್ಪಿನಂಗಡಿ-ಹಿರೆಬಂಡಾಡಿ ರಸ್ತೆಯ ನೂಜಿ ಎಂಬಲ್ಲಿ ನಿಂತುಕೊಂಡು ಅಮಲು ಸೇವನೆ ನಶೆಯಲ್ಲಿ ಹೀನಾಯವಾಗಿ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿದ್ದ. ಈತನನ್ನು ವಿಚಾರಣೆ ನಡೆಸಿದ ವೇಳೆ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವಶಕ್ಕೆ ಪಡೆದು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು ವೈದ್ಯರು ಗಾಡ್ ಪ್ರೀ ಯಾನೆ ಸುರೇಶನನ್ನು ಪರೀಕ್ಷಿಸಿ ಗಾಂಜಾ ಸೇವನೆ ಮಾಡಿದ ಬಗ್ಗೆ ಪಾಸಿಟಿವ್ ದೃಢಪತ್ರ ನೀಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here