ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ- ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಶ್ರೀ ಕ್ಷೇತ್ರ ಹನುಮಗಿರಿಗೆ ಭೇಟಿ

0

ಈಶ್ವರಮಂಗಲ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ- ಜಸ್ಟೀಸ್ ರಾಜೇಶ್ ರೈ ಕಲ್ಲಂಗಳ ಶ್ರೀ ಕ್ಷೇತ್ರ ಹನುಮಗಿರಿಗೆ ಭೇಟಿ ನೀಡಿ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಗೆ ರಂಗ ಪೂಜೆಯನ್ನು ಸಲ್ಲಿಸಿದರು. ಹಾಗೂ ಅಮರಗಿರಿಯಲ್ಲಿರುವ ಭಾರತ ಮಾತೆಗೆ ಪುಷ್ಪಾರ್ಚನೆಯನ್ನು ಸಲ್ಲಿಸಿದರು.

ಪ್ರಕೃತಿಯ ಮಡಿಲಲ್ಲಿ ನಿರ್ಮಾಣವಾಗಿರುವ ಅಮರಗಿರಿಯ ಪ್ರಶಾಂತ ವಾತಾವರಣದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಯುತ ಮೂಡೆತ್ತಾಯ, ಧರ್ಮದರ್ಶಿಗಳಾದ ಶಿವರಾಂ ಪಿ, ಶಿವರಾಂ ಶರ್ಮ, ವಕೀಲರಾದ ಶ್ರೀಕಾಂತ್ ಪಿ ಎಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here