ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ವಾರ್ಷಿಕ ಕ್ರೀಡಾ ಕೂಟ

0

ಜೂ.17 ತಾಲ್ಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಅಪ್ಪು ಮತ್ತು ಮುಖ್ಯ ಅಥಿತಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಪ್ರಾಂಶುಪಾಲ ಧರ್ಣಪ್ಪ ಗೌಡ. ಕೆ ಇವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಕ್ರೀಡಾ ಉತ್ಸಾಹವನ್ನು ತುಂಬಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಘಟಕದ ಸಂಚಾಲಕ ಹರೀಶ್ ನಾಯಕ್, ವಿದ್ಯಾರ್ಥಿಗಳ ಕ್ಷೇಮಾಪಾಲನ ಅಧಿಕಾರಿ ನಮಿತಾ ಪೈ, ದೈಹಿಕ ಶಿಕ್ಷಣ ನಿರ್ದೇಶಕ ಜ್ಯೋತಿ, ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನೀತ್,ಕ್ರೀಡಾ ನಾಯಕ ನರೇಂದ್ರ ಉಪಸ್ಥಿತರಿದ್ದರು.

ಮಲ್ಲಿಕಾ ತೃತೀಯ ಬಿ.ಎ ಕಾರ್ಯಕ್ರಮ ನಿರೂಪಿಸಿದರು. ನರೇಂದ್ರ ತೃತೀಯ ಬಿ.ಕಾಂ ಅವರು ಸ್ವಾಗತಿಸಿದರು. ಹರ್ಷಿತ್ ಕುಮಾರ್ ಎಂ.ಜಿ ತೃತೀಯ ಬಿ.ಎ ಅವರು ಅಥಿತಿ ಪರಿಚಯ ಬೋಧಿಸಿದರು. ಮನೀಶ್ ಪ್ರಥಮ ಬಿ.ಕಾಂ ಅವರು ವಂದಿಸಿದರು. ಈ ಸಂದರ್ಭದಲ್ಲಿ ಅಧ್ಯಾಪಕರು,ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here