ಸೆಂಟ್ಯಾರು: ಬೈಕ್‌ಗಳೆರಡರ ಮಧ್ಯೆ ಅಪಘಾತ

0

ಪುತ್ತೂರು:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಲ್ಲರ್ಪೆ ಸಮೀಪದ ಸೆಂಟ್ಯಾರು ಶಾಲಾ ಬಳಿ ಜೂ.18ರಂದು ರಾತ್ರಿ ಬೈಕ್‌ಗಳೆರಡರ ಮಧ್ಯೆ ಅಪಘಾತ ಸಂಭವಿಸಿದೆ.
ತಿಂಗಳಾಡಿ ಕಡೆಯಿಂದ ಪುತ್ತೂರು ಕಡೆ ಬರುತ್ತಿದ್ದ ಬೈಕ್ ಮತ್ತು ಸುಳ್ಯ ಕಡೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದವರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದ ಪೈಕಿ ತಿಂಗಳಾಡಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬೈಕ್‌ನಲ್ಲಿದ್ದವರನ್ನು ಶಶಿ ಮತ್ತು ರವಿ ಎಂದು ಗುರುತಿಸಲಾಗಿದೆ. ಇನ್ನೊಂದು ಬೈಕ್‌ನಲ್ಲಿದ್ದವರ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here