ಬೆಳಂದೂರು ಕೊಡಿಮಾರು ಕ್ಷೇತ್ರದಲ್ಲಿ ಶ್ರೀ ಗಣಪತಿ ಹವನ, ಮೃತ್ಯುಂಜಯ ಹೋಮ, ದುರ್ಗಾ ಪೂಜೆ

0

ಕಾಣಿಯೂರು: ಬೆಳಂದೂರು ಗ್ರಾಮದ ಕೊಡಿಮಾರು ಅಬೀರ ಶ್ರೀ ಉಳ್ಳಾಕುಲು, ವ್ಯಾಘ್ರ ಚಾಮುಂಡಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಗಣಪತಿ ಹವನ, ಮೃತ್ಯುಂಜಯ ಹೋಮ ಮತ್ತು ದುರ್ಗಾ ಪೂಜೆ ನಡೆಯಿತು.

ಶಿವರಾಮ ಉಪಾಧ್ಯಾಯ ಮತ್ತು ಜಗನ್ನಾಥ ಕಲ್ಪಡ ಇವರ ನೇತೃತ್ವದಲ್ಲಿ ವಿವಿಧ ಪೂಜಾ ಕಾರ್ಯಕ್ರಮ ನಡೆಯಿತು.ಬೆಳಿಗ್ಗೆ ಗಣಪತಿ ಹವನ ಮೃತ್ಯುಂಜಯ ಹೋಮ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ಸಂಜೆ ದುರ್ಗಾ ಪೂಜೆ ನಡೆದು, ರಾತ್ರಿ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.


ಈ ಸಂದರ್ಭದಲ್ಲಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ತಿಮ್ಮಪ್ಪ ಗೌಡ ಕಾಯರ್ತಡಿ, ಅಧ್ಯಕ್ಷರಾದ ಉದಯ ರೈ ಮಾದೋಡಿ, ಪ್ರಧಾನ ಕಾರ್ಯದರ್ಶಿ ಜಯಂತ ಅಬೀರ, ಕೋಶಾಧಿಕಾರಿ ಶೇಷಪ್ಪ ಕರೆಮನೆ, ತರವಾಡು ಮನೆಯ ಕೃಷ್ಣಪ್ಪ ಗೌಡ ಕಂಡೂರು, ಸೇವಾಕರ್ತರಾದ ವಿಷ್ಣು ಗೌಡ ಅಬೀರ, ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here