ಮಹಾಲಿಂಗೇಶ್ವರ ದೇವಸ್ಥಾನದ ನಾಗನಗುಡಿಯ ಅರ್ಚಕ ಮಹಾಲಿಂಗೇಶ್ವರ ಭಟ್ ನಿಧನ

0

ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗನ ಸನ್ನಿಧಿಯಲ್ಲಿ ಅರ್ಚಕರಾಗಿದ್ದ ಕೋಟೆ ಮಹಾಲಿಂಗೇಶ್ವರ ಭಟ್(58ವ)ರವರು ಜೂ.19ರಂದು ನಿಧನರಾದರು.

ಮೂಲತಃ ಬೆಳ್ಳಾರೆ ಕೋಟೆ ಮನೆತನದವರಾಗಿರುವ ಮಹಾಲಿಂಗೇಶ್ವರ ಭಟ್ ಅವರು ಪುತ್ತೂರು ಕೊಡಿಪ್ಪಾಡಿ ಸಮೀಪದ ಬಿರಾವು ಎಂಬಲ್ಲಿ ಮನೆ ಮಾಡಿ ವಾಸ್ತವ್ಯ ಹೊಂದಿದ್ದರು.ಅಲ್ಪಕಾಲದ ಅಸೌಖ್ಯದಿಂದಾಗಿ ಅವರು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರು.ಮೃತರು ಪತ್ನಿ ಶಶಿಕಲಾ, ಪುತ್ರ ನರೇಶ್‌ಕೃಷ್ಣ, ಪುತ್ರಿ ಸ್ವಾತಿ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here