ಮಂಜಲ್ಪಡ್ಪು ಬೈಪಾಸ್ ರಸ್ತೆಯಲ್ಲಿ ಕಾರಿನ ಮೇಲೆ ಬಿದ್ದ ಲಾರಿಯಿಂದ ಕಳಚಿದ ಕಂಟೈನರ್ – ಕಾರಿನೊಳಗಿದ್ದ ಚಾಲಕ ಅಪಾಯದಿಂದ ಪಾರು

0

ಪುತ್ತೂರು: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ಕಂಟೈನರ್ ಲಾರಿಯಿಂದ ಕಂಟೈನರ್ ಕಳಚಿ ಬಿದ್ದ ಘಟನೆ ಮಾಣಿ ಮೈಸೂರು ರಾಷ್ಡ್ರೀಯ ಹೆದ್ದಾರಿ ಮಂಜಲ್ಪಡ್ಪು ಬೈಪಾಸ್ ರಸ್ತೆಯಲ್ಲಿ ಜೂ.20 ರಂದು ರಾತ್ರಿ ನಡೆದಿದ್ದು, ಕಾರಿನೊಳಗಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕ ಮನೋಜ್ ಸ್ಟುಡಿಯೋದ ಮನೋಜ್ ಅವರು ಅಪಾಯದಿಂದ ಪಾರಾದವರು. ಅವರು ಮಂಜಲ್ಪಡ್ಪು ಬೈಪಾಸ್ ಬಳಿ ತನ್ನ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಕಾರಿನೊಳಗೆ ಕುಳಿತ್ತಿದ್ದರು. ಈ ಸಂದರ್ಭ ಮಡಿಕೇರಿ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯಿಂದ ಕಂಟೈನರ್ ಕಳಚಿ ಕಾರಿನ ಮೇಲೆ ಬಿದ್ದಿದೆ. ಕಂಟೈನರ್ ಬಿದ್ದ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು. ಕಾರಿನೊಳಗಿದ್ದ ಮನೋಜ್ ಅವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದು ಕೊಂಡಿದ್ದಾರೆ.

LEAVE A REPLY

Please enter your comment!
Please enter your name here