ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲೆಗೆ ಶಾಸಕರ ಭೇಟಿ

0

ಪುತ್ತೂರು: ಹಿರೆಬಂಡಾಡಿ ಸರಕಾರಿ ಪ್ರೌಢ ಶಾಲೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಶಾಲಾ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯ ಬಗ್ಗೆ ಮುಖ್ಯ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು.


ಶಾಲೆಯಲ್ಲಿ ನೂತನ ಎಸ್‌ಡಿಎಂಸಿ ಸಮಿತಿ ರಚನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರು ಮುಖ್ಯ ಶಿಕ್ಷಕರಿಗೆ ಶಾಸಕರು ಸಲಹೆ ಸೂಚನೆಯನ್ನು ನೀಡಿದರು. ತಕ್ಷಣವೇ ಪೋಷಕರ ಸಭೆ ನಡೆಸಿ ಎಸ್‌ಡಿಎಂಸಿ ಸದಸ್ಯರನ್ನು ಆಯ್ಕೆ ಮಾಡಬೇಕು. ಜಾತಿ, ಮತ , ಪಕ್ಷ ಬೇದವಿಲ್ಲದೆ ಸಮಿತಿ ಸದಸ್ಯರನ್ನು ಆಯ್ಕೆ ಮಾಡಬೇಕು. ಶಾಲೆಯಲ್ಲಿ ರಾಜಕೀಯ ಆಗದಂತೆ ನೋಡಿಕೊಳ್ಳಬೇಕು. ಶಾಲಾ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕಿದೆ ಎಂದು ಶಾಸಕರು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಪೋಷಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here