ಜೂ.25ಕ್ಕೆ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಬಿತ್ತನೆ ಕಾರ್ಯ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ಭತ್ತ ಬಿತ್ತನೆ ಕಾರ್ಯ ಜೂ. 25ರಂದು ನಡೆಯಲಿದೆ.


ಶಾಸಕ ಅಶೋಕ್ ಕುಮಾರ್ ರೈ ಭತ್ತ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಬಳಿಕ ವ್ಯವಸ್ಥಾಪನ ಸಮಿತಿಯೊಂದಿಗೆ ದೇವಳದ ಅಭಿವೃದ್ಧಿ ಕಾರ್ಯಗಳ ಮತ್ತು ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚಿಸಲಿದ್ದಾರೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here