ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.
ಪುತ್ತೂರು ಯೋಗ ಕೇಂದ್ರದ ಗುರುಗಳಾದ ಡಾ. ಪ್ರಸಾದ್ ಪಾಣಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷರು, ನ್ಯಾಯವಾದಿ ಆಗಿರುವ ಗಿರೀಶ್ ಮಳಿ, ಪುತ್ತೂರು ಯೋಗ ಕೇಂದ್ರದ ಉಪಾಧ್ಯಕ್ಷರು, ವಾಣಿಜ್ಯ ತೆರಿಗೆಯ ನಿವೃತ್ತ ಅಧಿಕಾರಿಗಳಾದ ರಾಮಚಂದ್ರ ಐ ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ , ಶ್ರೀಮತಿ ಹೇಮ ನಾಗೇಶ್ ರೈ ಉಪಸ್ಥಿತರಿದ್ದರು.

ಜಯಶೀಲ ಯೋಗ ಪ್ರಾರ್ಥನೆ ಹಾಡಿದರು. ಮುಖ್ಯಗುರು ಸರಸ್ವತಿ ಯಂ ವಂದಿಸಿದರು. ಶಿಕ್ಷಕಿ ವಿನಯ ವಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಯೋಗ ಗುರು ಶಶಿಕಲಾ, ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ ಸಹಕರಿಸಿದರು. ಸಂಸ್ಥೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಸಿಬ್ಬಂದಿಗಳೂ
ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here