ಉಪ್ಪಿನಂಗಡಿ: ಬಸ್ಸಿನಿಂದ ಬಿದ್ದು ಮಹಿಳೆಗೆ ಗಾಯ

0

ಉಪ್ಪಿನಂಗಡಿ: ಇಲ್ಲಿನ ಸಮೀಪದ ಉರುವಾಲು ಗ್ರಾಮದ ಮಚ್ಚೆ ಎಂಬಲ್ಲಿ ಬಸ್ಸಿನಿಂದ ಬಿದ್ದು ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಜೂ.22ರಂದು ಸಂಭವಿಸಿದೆ.
ಉರುವಾಲು ಪದವು ನಿವಾಸಿ ಮುಸ್ತಾಫ ಎಂಬವರ ಪತ್ನಿ ಹಸೀನಾ (24) ಎಂಬಾಕೆ ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ಬಸ್ಸು ಚಲಾಯಿಸಲ್ಪಟ್ಟಾಗ ಕೆಳಗೆ ಬಿದ್ದ ಆಕೆ ಗಂಭೀರವಾಗಿ ಗಾಯಗೊಂಡ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತಿದ್ದಾರೆ.

LEAVE A REPLY

Please enter your comment!
Please enter your name here