ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಅಮ್ಮನವರ ಸೇವಾ ಸಮಿತಿಯಿಂದ ಕರ ಸೇವೆ

0

ಪುತ್ತೂರು : ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಾಲ್ತಾಡು ಶ್ರೀ ಅಮ್ಮನವರ ಸೇವಾ ಸಮಿತಿಯಿಂದ ಜೂ.23ರಂದು ಕರಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ಮೋಹನ್‌ದಾಸ್ ರೈ, ಸತೀಶ್ ರೈ ,ಅರುಣ್ ಕುಮಾರ್ ರೈ ಮೊದಲಾದವರಿದ್ದರು.

ಜೂ.25ರಂದು ಕರಸೇವೆ 
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಜೂ.25ರಂದು ಕರ ಸೇವೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here