ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ – ಕನ್ಯಾಡಿ ಸ್ವಾಮೀಜಿ ಭೇಟಿ ಬಳಿಕ ಹೋರಾಟಕ್ಕೆ ನಿರ್ಧಾರ- ವಿಎಚ್ ಪಿ

0

ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯುವ ಹಿಂದೂ ವಿರೋಧಿ ನಡೆಯ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ಮಾರ್ಗದರ್ಶನ ಪಡೆಯಲಾಯಿತು.


ಈ ಸಂದರ್ಭದಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ವಿಶ್ವ ಹಿಂದೂ ಪರಿಷದ್ ವಿಭಾಗ ಸಾಮಾಜಿಕ ಸಾಮರಸ್ಯ ಪ್ರಮುಖ್ ಭಾಸ್ಕರ ಧರ್ಮಸ್ಥಳ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಜರಂಗದಳದ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ್ ಕುಂಜೂರುಪಂಜ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here