ಮಳೆ,ಬೆಳೆ ಹಾಗೂ ಕ್ಷೇತ್ರದ ಜನರಿಗಾಗಿ ಶಾಸಕರಿಂದ ಪ್ರಾರ್ಥನೆ

0

ಪುತ್ತೂರು: ಪುತ್ತೂರು ಕ್ಷೇತ್ರದ ಜನತೆಗಾಗಿ ಮತ್ತು ಮಳೆ,ಬೆಳೆಗಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.‌ ಮಳೆಗಾಲ ಆರಂಭವಾಗಿ ತಿಂಗಳು ಕಳೆಯುತ್ತಾ ಬಂದಿದೆ ಆದರೆ ಇನ್ನೂ ಸಮೃದ್ದವಾಗಿ ಮಳೆ ಬಂದಿಲ್ಲ. ಕ್ಷೇತ್ರದಲ್ಲಿ ಈ ಬಾರಿ ಉತ್ತಮ ಮಳೆ ಹಾಗೂ ಬೆಳೆ ಬಂದು ಜನರಿಗೆ ನೆಮ್ಮದಿಯನ್ನು ಕರುಣಿಸುವಂತೆ ದೇವರಲ್ಲಿ ಪ್ರಾರ್ಥಿಸಿಕೊಂಡರು.ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಮುರಳೀದರ ರೈ ಮಠಂತಬೆಟ್ಟು,ಜಯಪ್ರಕಾಶ್ ಬದಿನಾರ್ , ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್ ಸಹಿತ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here