ಬಿಳಿನೆಲೆ: ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ

0

ಕಡಬ: ದ.ಕ ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆ, ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಯ ಆಶ್ರಯದಲ್ಲಿ ನಡೆಸಲ್ಪಡುವ ಶ್ರೀಗೋಪಾಲಕೃಷ್ಣ ಪ್ರೌಢ ಶಾಲೆ ಬಿಳಿನೆಲೆ ಮತ್ತು ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆಯ ವಿದ್ಯಾರ್ಥಿಗಳಿಗೆ ತುರ್ತು ಸ್ಥಿತಿಗಳಲ್ಲಿ ಬೆಂಕಿ ನಂದಿಸುವ ವಿಧಾನದ ಪ್ರಾತ್ಯಕ್ಷಿಕೆಯನ್ನು ಬಿಳಿನೆಲೆ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ಜೂ. 24 ರಂದು ನಡೆಸಿದರು.

ಶಾಲಾ ಸಂಚಾಲಕ ಸುದರ್ಶನ ಜೋಯಿಸ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸತ್ಯಶಂಕರ ಸ್ವಾಗತಿಸಿದರು. ಜಿಲ್ಲಾ ಅಗ್ನಿಶಾಮಕ ದಳದ ಮುಖ್ಯಸ್ಥ ಭರತ ಕುಮಾರ್ ಬೆಂಕಿ ಆರಿಸುವ ಕುರಿತು ತರಬೇತಿ ನೀಡಿದರು.


ಭರತ್ ಕುಮಾರ್ ಮತ್ತು ಸಿಬ್ಬಂದಿಗಳನ್ನು ಶಾಲಾ ಸಂಚಾಲಕರು ಸಮ್ಮಾನಿಸಿ ಗೌರವಿಸಿದರು.ವೇದವ್ಯಾಸ ವಿದ್ಯಾಲಯದ ಮುಖ್ಯಸ್ಥ ಪ್ರಶಾಂತ.ಬಿ. ವಂದಿಸಿದರು,ಗಣೇಶ್ ಕಾಶಿಕಟ್ಟೆ ಸಹಕರಿಸಿದರು.

LEAVE A REPLY

Please enter your comment!
Please enter your name here