ತೋಡಿನಂತಾದ ಬನ್ನೂರು ಆನೆಮಜಲು ರಸ್ತೆವಾಹನ ಸವಾರರಿಗೆ, ಶಾಲಾ ಮಕ್ಕಳಿಗೆ ತಪ್ಪದ ಸಂಕಷ್ಟ

0


ಪುತ್ತೂರು: ಬನ್ನೂರು ಆನೆಮಜಲು ರಸ್ತೆಯಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿಯೇ ನೀರು ನಿಂತು ವಾಹನ ಸವಾರರು ಹಾಗೂ ಪಾದಚಾರಿಗಳು ಕಷ್ಟಪಡುವಂತಾಗಿದೆ.


ನಗರಸಭಾ ವ್ಯಾಪ್ತಿಯ ಮುಖ್ಯರಸ್ತೆಯಿಂದ ಆನೆಮಜಲು ಸಂಪರ್ಕಿಸುವ ಇಂಟರ್‌ಲಾಕ್ ರಸ್ತೆ ಇದಾಗಿದ್ದು ರಸ್ತೆಯ ಬದಿಯಲ್ಲಿ ಚರಂಡಿ ವ್ಯವಸ್ಥೆಯೂ ಇದೆ. ಆದರೆ ಚರಂಡಿಯ ನಿರ್ವಹಣೆ ಇಲ್ಲದೆ ಮಳೆ ನೀರು ಚರಂಡಿಗೆ ಹರಿದುಹೋಗದೆ ರಸ್ತೆಯಲ್ಲೇ ನೀರು ನಿಂತು ವಾಹನ ಸವಾರರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಸಂಚಾರಕ್ಕೆ ಕಷ್ಟವಾಗುತ್ತಿದೆ. ಸಂಬಂಧಪಟ್ಟ ಇಲಾಖಾಧಿಕಾರಿ ಹಾಗೂ ಜನಪ್ರತಿನಿಧಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here