ಬಿಲ್ಲವ ಸಂಘದ ಆರ್ಯಾಪು ಗ್ರಾಮ ಸಮಿತಿ ಮಹಾಸಭೆ, ಪುಸ್ತಕ ವಿತರಣೆ

0

ಪುತ್ತೂರು:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಆರ್ಯಾಪು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆಯು ಜು.25ರಂದು ಸಂಪ್ಯ ಹಿ.ಪ್ರಾ ಶಾಲಾ ಸಭಾಂಗಣದಲ್ಲಿ ನಡೆಯಿತು.


ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಕಾರ್ಯಕ್ರಮನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಆರ್ಯಾಪು ಗ್ರಾಮ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಸಂಪ್ಯ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವ ಸಂಘದ ಉಪಾಧ್ಯಕ್ಷ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ಚಿದಾನಂದ ಸುವರ್ಣ, ಕೋಶಾಧಿಕಾರಿ ಮಹೇಶ್ಚಂದ್ರ ಸಾಲಿಯಾನ್, ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಮುಕ್ವೆ, ನಾರಾಯಣ ಗುರು ಮಂದಿರದ ಹೊನ್ನಪ್ಪ ಪೂಜಾರಿ ಕೈಂದಾಡಿ, ಆರ್ಯಾಪು ವಲಯ ಸಂಚಾಲಕ ರಾಜೇಶ್ ಪೂಜಾರಿ, ಆರ್ಯಾಪು ಗ್ರಾ.ಪಂ ಸದಸ್ಯ ನೇಮಾಕ್ಷ ಸುವರ್ಣ, ಕರ್ನಾಟಕ ಬ್ಯಾಂಕ್ ಉಪ್ಪಿನಂಗಡಿ ಶಾಖಾ ಪ್ರಬಂಧಕ ಹರೀಶ್ ಪೂಜಾರಿ ಉದ್ಯಂಗಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಆರ್ಯಾಪು ಗ್ರಾಮ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ನಿರೀಕ್ಷಾ ಪ್ರಾರ್ಥಿಸಿದರು. ಗ್ರಾಮ ಸಮಿತಿ ಅಧ್ಯಕ್ಷ ಅಶೋಕ್ ಸಂಪ್ಯ ಸ್ವಾಗತಿಸಿದರು. ಸುರೇಶ ಪೂಜಾರಿ, ರವೀಂದ್ರ ಪೂಜಾರಿ, ಕೃಷ್ಣಪ್ಪ ಪೂಜಾರಿ ಸುಧಾಕರ ಕೋಟ್ಯಾನ್, ಸವಿತಾ ಅತಿಥಿಗಳನ್ನು ಶಾಲು ಹಾಕಿ ಸ್ವಾಗತಿಸಿದರು. ಉಮೇಶ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here