ಕಾಪೆಜಾಲು -ಉಳವ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪೆಜಾಲು -ಉಳವ ರಸ್ತೆಗೆ ಗ್ರಾಮ ಪಂಚಾಯತ್ ನ ರೂ 3ಲಕ್ಷ ಅನುದಾನದಲ್ಲಿ ಕಾಂಕ್ರೀಟ್ ಕರಣಕ್ಕೆ ಗುದ್ದಲಿ ಪೂಜೆಯನ್ನು ಜೂ 25ರಂದು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಉದನಡ್ಕ, ಪಿ ಎಲ್.ಡಿ ಬ್ಯಾಂಕ್ ನಿರ್ದೇಶಕ ದೇವಯ್ಯ ಖಂಡಿಗ, ಚಾರ್ವಾಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಕೊಪ್ಪ , ತೇಜಕುಮಾರಿ ಉದ್ಲಡ್ಡ, ಮಾಜಿ ಸದಸ್ಯರಾದ ಸುಂದರ ದೇವಸ್ಯ, ಭಾರತೀಯ ಜನತಾ ಪಾರ್ಟಿಯ ನಾಣಿಲ ಬೂತ್ ಸಮಿತಿಯ ಅಧ್ಯಕ್ಷ ವೀರಪ್ಪ ಉದ್ಲಡ್ಡ, ಕಾರ್ಯದರ್ಶಿ ಜನಾರ್ಧನ ಗೌಡ ಕೆಳಗಿನಕೇರಿ, ಹಿರಿಯರಾದ ಜನಾರ್ಧನ ಗೌಡ ಉಳವ, ಮೋನಪ್ಪ ಗೌಡ ಉಳವ, ಪಕ್ಷದ ಕಾರ್ಯಕರ್ತರು ಗಳು, ಗುತ್ತಿಗೆದಾರರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು. ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉದುನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೂತ್ ಸಮಿತಿ ಕಾರ್ಯದರ್ಶಿ ಜನಾರ್ಧನ ಗೌಡ ಕೆಳಗಿನ ಕೇರಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here