ಜೂ.29: ಐ.ಆರ್.ಸಿ.ಎಂ.ಡಿ ಅಬಾಕಸ್ ಶಿಕ್ಷಣ ಸಂಸ್ಥೆಯ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ

0

ಪುತ್ತೂರು: ಐ.ಆರ್.ಸಿ.ಎಂ.ಡಿ ಎಜ್ಯುಕೇಶನ್ ಸೆಂಟರ್ ವತಿಯಿಂದ ಜೂ. 29ರಂದು ಬೆಳಗ್ಗೆ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.


ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಮಂಗಳೂರು ಹಾಗು ಗೌರವ ಅತಿಥಿಗಳಾಗಿ ದ.ಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಪುತ್ತೂರು ಸಂಜೀವಿನಿ ಕ್ಲಿನಿಕ್ ನ ಡಾ.ರವಿನಾರಾಯಣ, ಕಹಳೆ ಕೇಬಲ್ ಟಿವಿ ಮುಖ್ಯಸ್ಥ ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಭಾಗವಹಿಸಲಿದ್ದಾರೆ.
TRS ಸಂಸ್ಥೆ ನಡೆಸಿದ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 32 ವಿದ್ಯಾರ್ಥಿಗಳು ಭಾಗವಹಿಸಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ವಿವಿಧ ವಿಭಾಗಳಲ್ಲಿ ಅನೇಕ ಪ್ರಶಸ್ತಿಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here