ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಶಿಕ್ಷಕ-ರಕ್ಷಕ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕ

0

ಪುತ್ತೂರು: ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಮಿತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಜೂ. 24ರಂದು ನೇಮಕ ಮಾಡಲಾಯಿತು.

ಶಾಲೆಯ ಅಭಿವೃದ್ಧಿಗೆ ಆಡಳಿತ ಮಂಡಳಿ, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ನಾಲ್ಕು ಸ್ಥoಭಗಳಿದ್ದಂತೆ. ಪ್ರಸಕ್ತ ಶೈಕ್ಷಣಿಕ ವರ್ಷದ ಕಾರ್ಯಕಲಾಪಗಳನ್ನು ಸುಸೂತ್ರವಾಗಿ ನೆರವೇರಿಸಲು ತರಗತಿವಾರು ಪ್ರತಿನಿಧಿಗಳ ಆಯ್ಕೆಯನ್ನು ಈಗಾಗಲೇ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರೆಲ್ಲರ ಒಮ್ಮತದ ಸಲಹೆಯ ಮೇರೆಗೆ 10ನೇ ತರಗತಿಯ ಪ್ರತಿನಿಧಿ ಅಕ್ಷತಾ ಶೆಣೈ ಅವರನ್ನು ಅಧ್ಯಕ್ಷೆಯನ್ನಾಗಿಯೂ, 7ನೇ ತರಗತಿಯ ಪ್ರತಿನಿಧಿ ಗಂಗಾಧರ ರೈ ಅವರನ್ನು ಉಪಾಧ್ಯಕ್ಷರನ್ನಾಗಿಯೂ ನೇಮಕ ಮಾಡಲಾಯಿತು.

“ಅತ್ಯoತ ಸಮರ್ಪಣಾ ಭಾವ ಮತ್ತು ಬದ್ಧತೆ ಹೊಂದಿದ ಈ ತಂಡದೊಂದಿಗೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ” ಎಂದು ನೂತನ ಪದಾಧಿಕಾರಿಗಳು ಭರವಸೆಯ ಮಾತುಗಳನ್ನಾಡಿದರು. ಶಾಲಾ ಪ್ರಾಂಶುಪಾಲರು ಹಾಗೂ ಉಪ ಪ್ರಾಂಶುಪಾಲರು ಪ್ರಸ್ತುತ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

LEAVE A REPLY

Please enter your comment!
Please enter your name here