ಸವಣೂರಿನಲ್ಲಿ ಮಹೇಶ್ ಕೆ ರವರಿಗೆ ಬಿಜೆಪಿಯಿಂದ ಗೌರವಾರ್ಪಣೆ

0

ಪುತ್ತೂರು: ಕಡಬ ತಾಲ್ಲೂಕು ಜನಜಾಗೃತಿ ವೇದಿಕೆಯ ನೂತನ‌ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿಜೆಪಿ ಮುಖಂಡ, ನ್ಯಾಯವಾದಿ ಮಹೇಶ್ ಕೆ ಸವಣೂರು ರವರನ್ನು ಬಿಜೆಪಿ ಸವಣೂರು ಮಹಾಶಕ್ತಿ ಕೇಂದ್ರ, ಬೂತ್ ಸಮಿತಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಶಾಸಕಿ ಭಾಗೀರಥಿ ಮುರುಳ್ಯ, ಸುಳ್ಯ ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ ಮತ್ತು ಬಿಜೆಪಿ ಮುಖಂಡರುಗಳಾದ ಎ.ವಿ. ತೀರ್ಥರಾಮ್, ಮಹೇಶ್ ರೈ ಮೇನಾಲ, ದಿನೇಶ್ ಮೆದು, ಗಣೇಶ ಉದನಡ್ಕ, ಇಂದಿರಾ ಬಿ.ಕೆ, ಸುರೇಶ್ ರೈ ಸೂಡಿಮುಳ್ಳು, ಗಿರಿ ಶಂಕರ್ ಸುಲಾಯ, ತಾರಾನಾಥ ಕಾಯರ್ಗ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here